Wednesday, April 3, 2013

ಹಾಸನದ ಬಳಿಯ ಹಿನ್ನೀರಿನಲ್ಲಿ ಮುಳುಗೇಳುವ ಶೆಟ್ಟಿಹಳ್ಳಿ ಚರ್ಚು!

ಸನಾದಿ ಅಪ್ಪಣ್ಣ ಚಿತ್ರದಲ್ಲಿ ಜಯಪ್ರದ.. ಅಣ್ಣಾವ್ರ (ಅಪ್ಪಣ್ಣ) ಸನಾದಿ ನಾದಕ್ಕೆ ನೃತ್ಯ ಮಾಡಬೇಕು ಎಂದು ಆಸೆ  ಇಟ್ಟುಕೊಂಡಿರುತ್ತಾರೆ. ಆದರೆ ಅದು ಸಾಧ್ಯವಾಗೋಲ್ಲ.. ಹೇಗಾದರೂ ಸರಿ ಅದನ್ನು ಸಾಧಿಸಬೇಕು ಎಂದು ಸ್ವಲ್ಪ ಬುದ್ಧಿವಂತಿಕೆಯಿಂದ ಸನಾದಿ ಹಿಡಿಯಲೂ ಕೂಡ ಬರದ ಬಾಲಣ್ಣ ಅವರನ್ನು ಕರೆಸಿ ಕಾರ್ಯಕ್ರಮ ಸಿದ್ಧಪಡಿಸುತ್ತಾರೆ. ಆ ಊರಿನ ಜನಕ್ಕೆ ಸನಾದಿ ಅಂದ್ರೆ ಅಪ್ಪಣ್ಣ... ಅಪ್ಪಣ್ಣ ಅಂದ್ರೆ ಸನಾದಿ.. ಹಾಗಾಗಿ ಬಾಲಣ್ಣ ಅವರ ಸನಾದಿ ನಾದ ಕೇಳುತ್ತಲೇ ಅಪಶೃತಿ ಅಪಶೃತಿ ಎಂದು ಗಲಾಟೆ ಶುರು ಮಾಡುತ್ತಾರೆ... ಕೋಪಗೊಳ್ಳುವ ಬಾಲಣ್ಣ ಇದು ಅಪಶೃತಿ ಅಲ್ಲ ಕಣ್ರೋ.. ಇದು ಅಪರೂಪದ ಶ್ರುತಿ ಎನ್ನುತ್ತಾರೆ.... !


ಒಂದು ಕಣ್ಣಿನಲ್ಲೇ ಪ್ರಪಂಚ ತೋರುವ 
ಹಾಗೆಯೇ ಕೆಲವೊಂದು ಕಟ್ಟಡಗಳು, ಸ್ಮಾರಕಗಳು ಯಾವುದೋ ಒಂದು ಉದ್ದೇಶದಲ್ಲಿ ಕಟ್ಟಿ ನಂತರ ಇನ್ನ್ಯಾವುದೋ ಯೋಜನೆಗಳಿಗೆ ಬಲಿಯಾಗಿ  ಅಪಶೃತಿಯಾಗಿ...  ಅಪರೂಪದ ವಸ್ತುಗಳು ಎನ್ನುವ ಹಣೆ ಪಟ್ಟಿ ಹೊತ್ತುಬಿಡುತ್ತವೆ.. ಅಂತಹ ಒಂದು ಕಟ್ಟಡ ಕರ್ನಾಟಕದ ಹಾಸನ ಬಳಿಯ ಗೊರೂರು ಎಂಬ ಊರಿನ ಬಳಿ ಇರುವ ಶೆಟ್ಟಿಹಳ್ಳಿಯಲ್ಲಿರುವ ಚರ್ಚ್.

ತಲುಪಲು ನಕಾಶೆ 



ಕೈ ಬೀಸಿ ಕರೆಯುತ್ತಿದೆ 
ಸುಮಾರು ೧೮೬೦ ಇಸವಿಯಲ್ಲಿ  ಫ್ರೆಂಚ್  ಪಾದ್ರಿಗಳಿಂದ  ನಿರ್ಮಾಣವಾದ ಈ ಚರ್ಚ್ ಹಾಸನ, ಸಕಲೇಶಪುರ  ಸುತ್ತಾ ಮುತ್ತಾ  ಪ್ರದೇಶಗಳಲ್ಲಿ ವಾಸವಿದ್ದ  ಕ್ರಿಸ್ಚಿಯನ್ನರಿಗೆ  ಉಪಯೋಗವಾಗುತ್ತಿತ್ತು ಎಂದು ತಿಳಿದುಬರುತ್ತದೆ. ಆ ಕಾಲದಲ್ಲಿ ಈ ಪ್ರದೇಶದ ಸುತ್ತಲು ಹಸಿರು ಹೊಲಗಳು ಇದ್ದಿರಬಹುದು ಎನ್ನುವ ಮಾತಿಗೆ ಸಾಕ್ಷಿಯಾಗಿ ಈಗಲೂ ಕೂಡ ಸುತ್ತ ಮುತ್ತಲು ಅನತಿ ದೂರದಲ್ಲಿ ಅಂತಹ ದೊಡ್ಡ ದೊಡ್ಡ ಕೈಗಾರಿಕೆಗಳಾಗಲಿ ಕಾಣ ಬರುವುದಿಲ್ಲ. ಸರಿ ಸುಮಾರು ೧೯೬೦ ಇಸವಿಯಲ್ಲಿ ಸರಕಾರ ಕುಡಿಯುವ ನೀರಿಗೆ ಹಾಗೂ ನೀರಾವರಿ ಯೋಜನೆಯ ಅಡಿ ಹೇಮಾವತಿ ನದಿಗೆ ಆಣೆಕಟ್ಟು ಕಟ್ಟಿದ ಪರಿಣಾಮ ಈ ಚರ್ಚ್ ಅಣೆಕಟ್ಟಿನ ಹಿನ್ನೀರಿನಲ್ಲಿ ಮುಳುಗಿ ಹೋಯಿತು. ಸುತ್ತ ಮುತ್ತಲ ಹಳ್ಳಿಯನ್ನು ಸ್ಥಳಾಂತರಿಸಿದರೂ ಈ ಚರ್ಚ್ ಹಾಗೆಯೇ ಉಳಿಯಿತು .
ಗತ ಕಾಲದ ಇತಿಹಾಸವನ್ನು ಗರ್ಭದೊಳಗೆ ಉಳಿಸಿಕೊಂಡು ನಿಂತಿದೆ 
ಆ ಕಾರಣದಿಂದಾಗಿ ಗೊರೂರು ಅಣೆಕಟ್ಟಿನಲ್ಲಿ ನೀರು ಹೆಚ್ಚಾದಾಗ ಈ ಚರ್ಚ್ ಭಾಗಶಃ ಮುಳುಗಿಹೋಗುತ್ತದೆ. ಅವಾಗ ತೆಪ್ಪಗಳಲ್ಲಿ ಈ ಚರ್ಚಿನ ತನಕ ಹೋಗಬಹುದು.  ಅನತಿ ದೂರದಲ್ಲಿರುವ ಸೇತುವೆ ಮೇಲೆ ನಿಂತು ಮುಳುಗಿ ಹೋದ ಕಟ್ಟಡದ ಮೇಲ್ಬಾಗವನ್ನು ನೋಡಬಹುದು. ಬೇಸಿಗೆಯಲ್ಲಿ ಅಥವಾ ಅಣೆಕಟ್ಟಿನಲ್ಲಿ ನೀರು ಕಡಿಮೆ ಇದ್ದರೇ ಚರ್ಚಿನ ತನಕ ಗಾಡಿಯಲ್ಲೇ ಹೋಗಬಹುದು.


ಒಂದು ಕಾಲದಲ್ಲಿ ಈ ಹಾದಿ ಹೇಗೆ ಇತ್ತು?
ನಾವು ಕಳೆದ ವಾರಾಂತ್ಯದಲ್ಲಿ ಕುಟುಂಬದ ಒಂದು ಕಾರ್ಯಕ್ರಮಕ್ಕೆ ಹಾಸನಕ್ಕೆ ಹೋಗಿದ್ದಾಗ ಈ ಪ್ರದೇಶಕ್ಕೆ ಭೇಟಿ ಕೊಡುವ ಅವಕಾಶ ಕೂಡಿಬಂತು.


ಕುಟುಂಬದ ಜೊತೆಯಲ್ಲಿ ಸ್ಮಾರಕದ ಮುಂದೆ
ಅಲ್ಲಿಗೆ ಹೋಗಿ ನೋಡಿದಾಗ ಆಗಲೇ ಸುಮಾರು ನೂರ ಅರವತ್ತು ವರ್ಷಗಳು ಕಳೆದಿರುವ ಈ ಕಟ್ಟಡ, ಕಳೆದ ೫೦ ವರ್ಷಗಳಿಂದ ನೀರಿನಲ್ಲೇ ಇರುವುದರಿಂದ ಕೆಲ ಭಾಗಗಳು ಬಿದ್ದುಹೋಗಿವೆ .. ಇನ್ನಷ್ಟು ಭಾಗಗಳು ಕಾಲನ ದಾಳಿಗೆ ಕುಸಿಯುವ ಎಲ್ಲಾ ಸೂಚನೆಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿದೆ ಎಂದು ಅರಿವಾಯಿತು.. ಭೇಟಿ ಆದಷ್ಟು ಬೇಗ ಮಾಡಿದಷ್ಟು ಈಗಿರುವ ಕಟ್ಟಡವನ್ನು ಅದೇ ಸ್ಥಿತಿಯಲ್ಲಿ ನೋಡಬಹುದು.
ಕಾಲನ ದಾಳಿಗೆ?
ಸುಂದರ ಕಮಾನುಗಳು, ಗವಾಕ್ಷಿಗಳು, ಎತ್ತರದ ಬಾಗಿಲುಗಳು, ಮಿನಾರುಗಳು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತವೆ. ಧರ್ಮ ಯಾವುದಾದರೇನು ಕಟ್ಟಡ ವಿನ್ಯಾಸ ಮನಸೆಳೆಯುತ್ತದೆ. ಅದನ್ನೆಲ್ಲ ನೋಡಿದಾಗ ಇದು ತನ್ನ ಉಚ್ಚ್ರಾಯ ಸ್ಥಿತಿಯಲ್ಲಿದ್ದಾಗ ಯಾವ ಗತ್ತು ಗಾಂಭೀರ್ಯ ಹೊಂದಿತ್ತು ಎಂದು ಕಲ್ಪಿಸಿಕೊಳ್ಳಬಹುದು.


ಬೃಹದ್ ಬಾಗಿಲು
ಸುಂದರಜಾಗಕ್ಕೆ ಭೇಟಿ ನೀಡಬೇಕು ಎಂಬ ಆಸೆ ಈಡೇರಿದ ಸಮಾಧಾನ ಒಂದು ಕಡೆಯಾದರೆ ಮನುಜನ ಆಸೆ ಆಕಾಂಕ್ಷೆಗಳು ಬೆಳೆಯುತ್ತಲೇ ಅನೇಕ ಸುಂದರ ಕಟ್ಟಡಗಳು, ಸ್ಮಾರಕಗಳು, ಮಂದಿರಗಳು ಅನೈತಿಕ ಚಟುವಟಿಕೆಗೆ ಆಸರೆಯಾಗಿಬಿಡುತ್ತವೆ ಎನ್ನುವ ಬೇಸರ ಕಾಡುತ್ತದೆ. ಎಲ್ಲಿ ನೋಡಿದರು ಒಡೆದ ಬಾಟಲಿಗಳು, ಬೇಡವಾದ ಕೆಲ ಪದಾರ್ಥಗಳು, ನೋಡೋಕೆ ಅಸಹ್ಯ ಎನ್ನಿಸುವಂತೆ ಎಲ್ಲೆಂದರಲ್ಲಿ ಕಾಣ ಸಿಗುತ್ತದೆ. ಗೋಡೆಗಳ ಮೇಲೆಲ್ಲಾ ಪ್ರೇಮಿಗಳ ಕೆತ್ತನೆ ಕೆಲಸಗಳು ಬೇಸರ ತರಿಸುತ್ತವೆ. ಅನೇಕ ಸುಂದರ ಸ್ಮಾರಕಗಳನ್ನೂ ರಕ್ಷಿಸಲಾಗದ ನಾವೇ ಆರಿಸಿದ  ಸರಕಾರ ಇನ್ನು ಜನರ ಸುಖಕ್ಕೆ ಶ್ರಮಿಸುವುದೇ ಎಂಬ ಗೊಂದಲ ಕಾಡುತ್ತದೆ!

Shettihalli Church - Gorur Dam - Hassan

Planned plans may fail..but failed plans sometimes clicks!!!...too tricky words..!!!

Yes you are right..when I first heard about a structure submerged in the back waters of a dam, my instinct always wanted to capture those frames. But did not know exactly where this structure stood in the back waters.  Surfing for information, and few pictures here and there, gave me a half baked information about the church in a dam. Digging the bore-well for the information..my eyes lit with a 10000 watts light!!!. 

Arey! what is this? this place is so near to my native place, and also I had been to the dam back waters many times!. 

Okay okay..don't press Ctrl+F to search me, and hit me black and blue. Am talking about Shetty Halli Church, which will get submerged during the monsoon in the Gorur Dam, but surfaces to show its glory in the summer or when the water level is low. The Gorur dam was built by the Government around 1960 to reserve & re-serve the waters of the river Hemavathy for irrigation and drinking projects. 


The Shettihalli church in the Gorur Dam
As many write-ups,  and many wiki reveals that,  this church had been built in 1860 by the french missionaries for the people in  Hassan, Sakaleshapura and its surroundings.  During the summer, when the water level is low, any vehicle will go almost inside the church :-). The structure, and the landscape around gives a good feel.  Even though we feel disgusted,  when we see the campus is littered with broken bottles, @#$#@ things, but still the landscape amazes you, and so the church...standing in a crumbling state. 


One more shot from the other side
But if we are able to turn the wrist watch backwards, we can visualize the majestic structure, the village ambiance, crystal clear voice of the birds, fragrance of flowers.....the mother nature at her best!
As seen from the bed of the back waters
From the main road the church stands at a stone throw away distance, since the water level was too low, we reached comfortably at the door step (sorry no doors..it is an open air theater from all the sides!!).


One of the few towers still standing
 Since we are at the site in the glaring sun, the monument showed all its sides, the majestic entrance, the walls, the towers everything was amazing. 
Probably the main hall of the church

One more look

The tall wall as seen from the floor!
Even though the pieces of the structure scattered here and there, since it had lost its muscles, but still standing on the bones, it will be a photographer's delight all the way! 


Road map from Hassan
The family..!
Hardly about thirty minutes drive from the center of the Hassan, and the condition of the road is also good, except few stretches, and a few hours spent in this campus can bring the light in to the frames.   Since there is no near by shops, better to carry food and water but caution to be taken not to lit the place. Even though sitting late in the evening for the sunset is not advisable, but if we do with caution, it will provide some stunning magical show of light and shadow!!!

Tuesday, February 12, 2013

ಕೆ. ಆರ್ ಪೇಟೆಯಲ್ಲಿ..ಹೊಯ್ಸಳರ ಕಲೆಯ ಮಧ್ಯದಲ್ಲಿ


(ಅರಳುತ್ತಲೇ ಕಂಪನ್ನು ಸೂಸುತ್ತಿರುವ ಕನ್ನಡದ ಸುಮಧುರ ಇ-ಪತ್ರಿಕೆ "ಪಂಜು"ವಿನಲ್ಲಿ  ಪ್ರಕಟಣೆಗೊಂಡಿದೆ. 
ಸಹೋದರ ನಟರಾಜು ಹಾಗೂ "ಪಂಜು" ತಂಡಕ್ಕೆ ಧನ್ಯವಾದಗಳು!)

"ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು...ಅಪಾರ ಕೀರ್ತಿಯೇ"

ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಹೆಸರಾಗಿದ್ದ ಶ್ರೀ ಆರ್. ಎನ್. ನಾಗೇಂದ್ರ ರಾಯರು ದಿಗ್ದರ್ಶಿಸಿದ್ದ ಮಹತ್ವಾಕಾಂಕ್ಷೆಯ ಚಿತ್ರ ವಿಜಯನಗರದ ವೀರಪುತ್ರ ಚಿತ್ರದ ಕುದುರೆ ನಡಿಗೆಯ ತಾಳದ ಜನಪ್ರಿಯ ಗೀತೆ ಕೇಳಿದಾಗೆಲ್ಲ ಕರ್ನಾಟಕದಲ್ಲಿ ಶಿಲ್ಪಕಲೆಯು ಉನ್ನತ ಸ್ಥಾಯಿ ಮುಟ್ಟಿದ್ದ ಹೊಯ್ಸಳ ಅರಸರ ಕಲೆಯು ನೆನಪಿಗೆ ಬರುತ್ತದೆ.  

ಡಿಸೆಂಬರ್ ೨೯ನೆ ತಾರೀಕು ಹಾಸನದಿಂದ ಮೈಸೂರಿಗೆ ಹೋಗಬೇಕಿತ್ತು..ಕರುನಾಡಿನ ಎಲ್ಲಾ ಸ್ಥಳಗಳು ಕೈ ರೇಖೆಯಂತೆ ಗುರುತು ಇಟ್ಟುಕೊಂಡಿರುವ "ನಿಮ್ಮೊಳಗೊಬ್ಬ ಬಾಲೂ" ಬ್ಲಾಗ್  ಖ್ಯಾತಿಯ ಬಾಲೂ ಸರ್ ಗೆ ಫೋನಾಯಿಸಿದೆ....ಚಕ ಚಕ ಅಂತ...ಒಂದು ಸಿದ್ಧ ಪ್ಲಾನ್ ಹೇಳಿಯೇ ಬಿಟ್ಟರು...ಚನ್ನರಾಯಪಟ್ಟಣ ಆದ ಮೇಲೆ ಬಲಕ್ಕೆ ತಿರುಗಿ ಕೆ.ಆರ್. ಪೇಟೆ ಕಡೆ ತಿರುಗಿಸಿರಿ...ಅಂತ...ಸರಿ ಗುರುಗಳ ಮಾರ್ಗದರ್ಶನದಲ್ಲಿ ಮುಂದುವರೆಯಿತು..ನಮ್ಮ ಗಾಡಿ.

ಕಿಕ್ಕೇರಿಗಿಂತ ಮುಂಚೆ  ಕಾರನ್ನು ನಿಲ್ಲಿಸಿ ಮತ್ತೆ ಫೋನ್ ಹಚ್ಚಿದೆ..ಕುರುಡನಿಗೂ ದಾರಿ ಗೊತ್ತಾಗಬೇಕು..ಹಾಗೆ ಅಚ್ಚುಕಟ್ಟಾಗಿ ದಾರಿ ಹೇಳಿದರು. ಗೋವಿಂದನ ಹಳ್ಳಿ ಮಾರ್ಗದಲ್ಲಿ ಓಡಿತು ನಮ್ಮ ರಥ...ಸುಮಾರು ೩-೪ ಕಿ.ಮಿ. ಸಾಗುತ್ತ ಹಳ್ಳಿಯ ಸೊಬಗನ್ನು ಸವಿಯುತ್ತ, ಹೊಲ ಗದ್ದೆಗಳ ರಾಶಿ ರಾಶಿ ಜಮೀನನ್ನು ನೋಡುತ್ತಾ ನಿಧಾನವಾಗಿ ಸಾಗಿದೆ. ಬಲ ಭಾಗದಲ್ಲಿ ಒಂದು ಫಲಕ ಕಾಣಿಸಿತು...ಮತ್ತು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಎಡಗಡೆ ಎಂದು ಬಾಣದ ಗುರುತು ಇತ್ತು...


ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದಾರಿ 
ಎಡಕ್ಕೆ ತಿರುಗಿ ಸೀದಾ ಒಂದು ೩೦೦ ಮೀಟರ್  ಬಂದಾಗ ಸಿಕ್ಕಿತು ಒಂದು ಸುಂದರ ಹೊಯ್ಸಳ ಕಲೆಯ ದೇವಾಲಯ...ಮನಕ್ಕೆ ಆಹಾ ಎನ್ನಿಸಿತು..ಅಚ್ಚುಕಟ್ಟಾಗಿ ಸುತ್ತಲು ಕಬ್ಬಿಣದ ತಂತಿಗಳ 
ಕಾಂಪೌಂಡ್ ನಿಂದ ಸುತ್ತುವರೆದು, ಹಸಿರು ಹುಲ್ಲು ಹಾಸಿನ ಮಧ್ಯೆ ಇದ್ದ ದೇವಾಲಯ ಸುಂದರವಾಗಿ ಕಂಡಿತು. ಸುಮಾರು ೧೨೩೦ರ ಆಸುಪಾಸಿನಲ್ಲಿ ನಿರ್ಮಾಣವಾದ ದೇವಾಲಯ  ಸಹಜವಾಗಿಯೇ ಹೊಯ್ಸಳರ ಕಾಲದ ಶಿಲ್ಪಿಗಳ ಕೈ ಚಳಕವನ್ನು ಅನಾವರಣ ಮಾಡಿತ್ತು. 


ಸುಂದರ ಆವರಣದೊಳಗೆ ಶಿಲ್ಪಿಗಳ ಕೈಚಳಕ
ನಿಧಾನವಾಗಿ ಕ್ಯಾಮೆರ ಹೊಟ್ಟೆಗೆ ಚಿತ್ರಗಳನ್ನು ತುಂಬಿಸುತ್ತಾ ಒಳಗೆ ಸಾಗಿದೆ. ಅಲ್ಲಿಯ ಕೂತಿದ್ದ ಒಬ್ಬರು ಒಳಗೆ ಬಂದು ದೇವಾಲಯದ ಪರಿಚಯ ಮಾಡಿಕೊಟ್ಟರು. ಒಂದೇ ದೇವಾಲಯದಲ್ಲಿ ಐದು ಶಿವಲಿಂಗದ ದರ್ಶನ ಬಲು ಅಪರೂಪ ಎಂದು ಹೇಳಿದರು. 
ಮೋಡಗಳ ಪರದೆಯಲ್ಲಿ ದೇವಸ್ಥಾನ
ಈಶಾನ್ಯೇಶ್ವರ, ತತ್ಪುರುಶೇಶ್ವರ, ಅಘೋರೇಶ್ವರ, ವಾಮದೇವೇಶ್ವರ ಮತ್ತು                                     ಸಧ್ಯೋ ಜಾತೇಶ್ವರ ಹೀಗೆ ಐದು ಬಗೆಯ ಹೆಸರಿನ ಶಿವಲಿಂಗಗಳಿಗೆ ಪ್ರತ್ಯೇಕ ಗುಡಿಗಳು, ಮತ್ತು ಅದಕ್ಕೆ ಸರಿಯಾಗಿ ಎದುರಿಗೆ ನಂದಿಗಳು ಇವೆ. ದೇವಸ್ಥಾನದ ಒಳಗೆ ಅಪ್ಪಣೆ ಪಡೆದು ಒಂದೆರಡು ಚಿತ್ರಗಳನ್ನು ಸೆರೆ ಹಿಡಿದು ಕೊಂಡೆ. ಅದರಲ್ಲೂ ಸಾಲು ಸಾಲು ಕಂಬಗಳ ಚಿತ್ರ ಮನಸಿಗೆ ಇಷ್ಟವಾಯಿತು. ಚಾಮುಂಡೇಶ್ವರಿ ವಿಗ್ರಹ, ಸುಬ್ರಮಣ್ಯ ವಿಗ್ರಹ, ಗಣಪತಿ ಎಲ್ಲವು ಸುಂದರವಾದ ಕೆತ್ತನೆಗಳಿಗೆ ಸಾಕ್ಷಿಯಾಗಿದ್ದವು. 


ರೈಲನ್ನು ನೆನಪಿಸುವಂತಹ ಸಾಲು ಸಾಲು ಕಂಬಗಳು 
ಹೊರಾಂಗಣವನ್ನು ಸುತ್ತಿ ಬಂದಾಗ ನೀಲಾಕಾಶದಲ್ಲಿ ಹತ್ತಿಯ ಹಾಗೆ ಹಿಂಜಿ ನಿಂತ ಮೋಡಗಳ ಹಿನ್ನೆಲೆಯಲ್ಲಿ ದೇವಾಲಯ ಇನ್ನಷ್ಟು ಸುಂದರವಾಗಿ ಕಂಡಿತು. 
ಮನಸಾರೆ ಚಿತ್ರಗಳನ್ನು ಸೆರೆಹಿಡಿದು ಅಲ್ಲಿಂದ ಹೊರಟೆವು, ಇನ್ನೊಂದು ಅದ್ಭುತ ಶಿಲ್ಪಕಲಾ ಗುಡಿಯ ಕಡೆಗೆ. 
ಸುಂದರ ಆವರಣ!
ಕೆ.ಆರ್. ಪೇಟೆ ಹತ್ತಿರ ಬಂದು ಮತ್ತೆ ಗುರುಗಳಿಗೆ ಫೋನಾಯಿಸಿದೆ. ಅಲ್ಲಿಯೇ ಹೊಸಹೊಳಲು ದೇವಸ್ಥಾನಕ್ಕೆ ದಾರಿ ಕೇಳಿ ಸುಮಾರು ಒಂದೆರಡು ಕಿ.ಮಿ ಹೋದರೆ ನಿಮಗೆ ದೇವಾಲಯ ಸಿಗುತ್ತೆ ಅಂತ ಹೇಳಿದರು. ನಿಧಾನವಾಗಿ ಚಲಿಸುತ್ತ ದಾರಿ ಕೇಳಿಕೊಂಡು ಹೋದಾಗ..ಮುಖ್ಯ ರಸ್ತೆಯಲ್ಲಿಯೇ ಒಂದು  ಕಮಾನು ನಮ್ಮನ್ನು ಸ್ವಾಗತಿಸಿತು. ಹೊಸಹೊಳಲು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಸ್ವಾಗತ ಎಂದು. 
ಹೊಸಹೊಳಲಿನ ಶ್ರೀ ಲಕ್ಷ್ಮಿ ನರಸಿಂಹ ದೇವಾಸ್ಥಾನ 
ಬೇಲೂರಿನ ಪ್ರತಿ ಕೃತಿಯಂತೆ ಕಂಡು ಬಂದ ಈ ದೇವಾಲಯದ ಮುಂಬಾಗ ನವಿಕರಣಗೊಂಡಿದ್ದರೂ, ಹೊಯ್ಸಳರ ಶಿಲ್ಪಿಗಳು ಪ್ರಭುತ್ವ ಮೆರೆದ ಇನ್ನೊಂದು ಕಲಾ ದೇಗುಲ ನಮ್ಮ ಮನಸಿಗೆ ಸಂತಸದ ಕಡಲನ್ನೇ ತಂದಿತ್ತು.   ಮಧ್ಯಾಹ್ನದ ಸಮಯ ಹತ್ತಿರ ಬಂದಿತ್ತು, ದೇವಾಲಯದ  ಕದ ಹಾಕುವ ಮುಂಚೆ ದೇವರ ದರ್ಶನ ಮಾಡಿದೆವು. ಅಲ್ಲಿಯ ಅರ್ಚಕರು ಅಲ್ಲಿಯ ಗರ್ಭ ಗುಡಿಯ ಕೆತ್ತನೆಗಳ ಬಗ್ಗೆ ಉಪಯುಕ್ತ ಮಾಹಿತಿ ಕೊಟ್ಟರು.


ಸುಂದರ ಕೆತ್ತನೆಗಳ ಆವರಣ
 ಶ್ರೀ ಲಕ್ಷ್ಮಿ ನಾರಾಯಣ, ಶ್ರೀ ಲಕ್ಷ್ಮಿ ನರಸಿಂಹ, ಶ್ರೀ ವೇಣು ಗೋಪಾಲ ಮೂರ್ತಿಗಳು ತುಂಬಾ ಮುದ್ದಾಗಿದ್ದವು, ಸುಂದರವಾದ ನವರಂಗ, ಅಮೋಘ  ಕುಸುರಿ ಕೆಲಸವನ್ನು ಹೊಂದಿದ್ದ ಕಂಬಗಳು ಒಂದಕ್ಕಿಂತ ಒಂದು ಸೊಗಸಾಗಿದ್ದವು. ಇದನ್ನು ಮನದಣಿಯೆ ನೋಡಬೇಕು. 
ಕ್ಯಾಮೆರಾದಲ್ಲಿ ಆದಷ್ಟು ತುಂಬಿಕೊಂಡು ಹೊರಗೆ ಬಂದೆ. 


ಶಿಲ್ಪಿಗಳ ಕೈಚಳ ಅಮೋಘ!
  ಸುಮಾರು ೧೨೫೦ ರ ಆಸುಪಾಸಿನಲ್ಲಿ ನಿರ್ಮಾಣವಾದ ದೇವಾಲಯವನ್ನು ಸುಂದರವಾಗಿ ರಕ್ಷಿಸಿದ್ದಾರೆ ಮತ್ತು ನೋಡಿಕೊಂಡಿದ್ದಾರೆ. ದೇವಾಲಯವನ್ನು ಒಂದು ಸುತ್ತು ಹಾಕಿದರೆ ನಮಗೆ ಅರಿವಿಲ್ಲದೆ ಸುಮಾರು ೮೦೦-೯೦೦ ವರ್ಷಗಳ ಹಿಂದೆ ಹೋಗಿಬಿಡುತ್ತೇವೆ. ಅಷ್ಟು ಸುಂದರ ಮೂರ್ತಿಗಳು, ಕುಸುರಿ ಕೆತ್ತನೆ, ಆಹಾ ಪದಗಳಲ್ಲಿ ಬಣ್ಣಿಸಲಾಗದು.  


ಪ್ರತಿ ಸಾಲಿನಲ್ಲೂ ಶಿಲ್ಪಿಗಳ ನೈಪುಣ್ಯ ಎದ್ದು ಕಾಣುತ್ತದೆ 

ಹೊಯ್ಸಳ ಶಿಲ್ಪಕಲೆ ಎಂದರೆ ಬೇಲೂರು ಹಳೇಬೀಡು ಅಷ್ಟೇ ಅಲ್ಲ..ಇಂತಹ ಅನೇಕ ಅಮೋಘ ಕೆತ್ತನೆಗಳು ಹಾಸನ, ಮೈಸೂರು, ಮಂಡ್ಯ, ಚಿಕಮಗಳೂರು, ಭದ್ರಾವತಿ, ಶಿವಮೊಗ್ಗ, ಹರಿಹರ,  ಹೀಗೆ ಅನೇಕ ಕಡೆ ಸಿಗುತ್ತದೆ. ಹೊಯ್ಸಳರಸರ ಕಾಲದ ಕೆತ್ತನೆ ಕಂಡು ಬರುವ ಇಲ್ಲಾ ದೇವಾಲಯಗಳನ್ನು ನೋಡುವ ತವಕ, ಉತ್ಸಾಹವಿದೆ.  ಭಗವಂತನ  ಅನುಗ್ರಹವಿದ್ದರೆ ಸಾಧ್ಯವಾಗುತ್ತದೆ ಎನ್ನುವ ಆಶಾಭಾವ ಹೊತ್ತು ದೇವಸ್ಥಾನದಿಂದ ಹೊರಟೆವು. 


ಪ್ರತಿಮೆಗಳು, ಅಲಂಕಾರ ಒಂದಕ್ಕೊಂದು ವಿಭಿನ್ನ...ಸುಂದರ

ಎರಡು ಸುಂದರ ದೇವಾಲಯಗಳನ್ನು ಭೇಟಿ ಮಾಡಲು ಮಾರ್ಗದರ್ಶನ ನೀಡಿದ ಬಾಲೂ ಸರ್ ಅವರಿಗೆ ಧನ್ಯವಾದ ತಿಳಿಸುತ್ತ ಈ ಲೇಖನವನ್ನು ಅವರಿಗೆ ಅರ್ಪಿಸುತ್ತಿದ್ದೇನೆ. ಧನ್ಯವಾದಗಳು ಬಾಲೂ ಸರ್.

Thursday, January 31, 2013

ಮನಸಿನ ಜಗತ್ತನ್ನು ಗೆದ್ದ ಬಾಹುಬಲಿಯ ಬಸದಿಯಲ್ಲಿ - ಶ್ರವಣಬೆಳಗೊಳ

ಸುಮಾರು ೨೯ ವರ್ಷಗಳ ಹಿಂದೆ .....ರೆಬಲ್ ಸ್ಟಾರ್ ಅಂಬರೀಶ್ ಅವರ ಸಿನಿಮಾಗಳನ್ನು  ಬಹಳ ಇಷ್ಟ ಪಡುತಿದ್ದ ಕಾಲ...ಕಾರಣ ಅವರ ಸಿನೆಮಾಗಳಲ್ಲಿ ಬಾಕ್ಸಿಂಗ್ (ಆಗಿನ ನಮ್ಮ ಬಾಲ ಭಾಷೆ) ಬಹಳ ಇರ್ತಾ ಇದ್ದವು.... ಆ ಸಿನಿಮಾದಲ್ಲಿ ನನಗೆ ಗೊತ್ತಿದ್ದಂತೆ ಪ್ರಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಂಡು ಸತ್ಯಂ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ "ಇದೆ ನಾಡು ಇದೆ ಭಾಷೆ ಎಂದೆಂದೂ ನನ್ನದಾಗಿರಲಿ"  ಹಾಡಿನಲ್ಲಿ ಬರುವ...

"ಚಾಮುಂಡಿ ರಕ್ಷಣೆ ನಮಗೆ
ಗೋಮಟೇಶ್ವರ ಕಾವಲು ಇಲ್ಲಿ..."

ಸಾಲು ಬಹಳ ಕಾಡಿತ್ತು...

ಗೊಮ್ಮಟ ಯಾಕೆ ಹಾಗೆ ....ಯಾಕೆ ಹೀಗೆ ನಿಂತ.... ಎನ್ನುವ ನೂರಾರು ತರ್ಕ ಬದ್ಧ ಪ್ರಶ್ನೆಗಳು ಕಾಡಿದ್ದವು...ಜೊತೆಗೆ ಗೋಮ್ಮಟನಷ್ಟೇ ಹೆಸರುವಾಸಿ ಆ ಬೃಹತ್ ಶಿಲ್ಪದ  ರೂವಾರಿ ಶ್ರೀ ಚಾವುಂಡರಾಯ..ಅದರಲ್ಲೂ ಶಾಲಾ ದಿನಗಳಲ್ಲಿ ಬಾಹುಬಲಿ ಹಾಗೂ ಭರತನ ನಡುವೆ ನಡೆಯುವ ಯುದ್ಧದ ವರ್ಣನೆ (ದೃಷ್ಠಿ ಯುದ್ದ,  ಜಲಯುದ್ದ  ಮಲ್ಲಯುದ್ಧ) ಇವೆಲ್ಲ ಕಣ್ಣಿಗೆ ಕಟ್ಟಿದಂತೆ ವರ್ಣನೆ ಮಾಡಿದ್ದ ನಮ್ಮ ಮಾಸ್ತರು..ಆ ಶಿಲ್ಪವನ್ನೊಮ್ಮೆ ನೋಡುವ ಕುತೂಹಲವನ್ನು ಇನ್ನಷ್ಟು ಹೆಚ್ಚು ಮಾಡಿದ್ದರು...

ನನ್ನ ಸ್ನೇಹಿತೆ (ನನ್ನ ಮಗಳು) ಹಾಸನಕ್ಕೆ ಹೋಗುವಾಗೆಲ್ಲ ಹೇಳುತಿದ್ದಳು ಒಮ್ಮೆ ಹೋಗೋಣ ಅಪ್ಪ ಅಂತ...ಸರಿ ಆ ಅವಕಾಶ ಒದಗಿ ಬಂತು...ಕಾರಣಾರ್ಥ ಹಾಸನಕ್ಕೆ ಹೋಗುವ ಅವಕಾಶ ಬಂದಾಗ ಸರಿ ಕರೆದೊಯ್ಯೋಣ ಎಂದು ಹೊರಟೆ...

ಇಂದ್ರ ಗಿರಿಯ ಮುಖ್ಯ ದ್ವಾರ 
ಬೆಟ್ಟದ ಬುಡದಲ್ಲಿ ನಿಂತಾಗ ಸುಮಾರು ಸಂಜೆ ನಾಲ್ಕು ಘಂಟೆಯಾಗಿತ್ತು...ಸೂರ್ಯ ತಂಪಾಗಲು ಹೊರಟಿದ್ದ...

"ಸರ್ ಕಾಲು ಸುಡುತ್ತೆ ಸರ್ ಸಾಕ್ಸ್ ತಗೊಳ್ಳಿ.."

"ಚಪ್ಪಲಿ ಹಾಕಿಕೊಂಡು ಬೆಟ್ಟ ಹತ್ತುವ ಹಾಗಿಲ್ಲ"

"ಮ್ಯಾಪ್ ತಗೊಳ್ಳಿ ಸರ್, ಬೇಳೂರು, ಹಳೇಬೀಡು, ಶ್ರವಣ ಬೆಳಗೊಳದ ಬಗ್ಗೆ ಪುಸ್ತಕ ಇದೆ ಸರ್" ಹೀಗೆಲ್ಲ ಪ್ರಾಣ ತಿಂತಾ ಇದ್ದರು ...
"ಅಪ್ಪ ಸಾಕ್ಸ್ ಬೇಡ..ಪುಸ್ತಕ ತಗೊಳ್ಳಿ ಓದೋಕೆ ಆಗುತ್ತೆ.."ಅಂದಳು ಮಗಳು...

ಶುರುವಾಯಿತು ಮೆಟ್ಟಿಲಿನ ಲೆಕ್ಕಾಚಾರ!
"ಸರಿ" ಎಂದೆ ...ಪುಸ್ತಕವನ್ನು  ಚೀಲಕ್ಕೆ ಹಾಕಿಕೊಂಡು...ನಿಧಾನವಾಗಿ ಸುಮಾರು ೬೫೦ ಮೆಟ್ಟಿಲು ಅಂತ ಅಂದಾಜು ಇರುವ ಇಂದ್ರ ಗಿರಿ ಬೆಟ್ಟವನ್ನು ಹತ್ತಲು ಶುರು ಮಾಡಿದೆವು..ಮಗಳು ಉತ್ಸಾಹದ ಚಿಲುಮೆಯಾಗಿದ್ದಳು..ಮನದನ್ನೆ ಮನವನ್ನೇ ಬಾಣಲೆ ಮಾಡಿಕೊಂಡು ಮನದಲ್ಲೇ ನನ್ನನ್ನು ಹುರಿಯುತಿದ್ದಳು...ನಾನು ಹಾಗೂ ಮಗಳು ಇಬ್ಬರೂ ನಗುತ್ತ...ಹಾಗೆ ಕ್ಯಾಮೆರಾಗೆ ಕೆಲಸ ಕೊಡುತ್ತ ಹತ್ತುತ್ತಾ ಸಾಗಿದೆವು...
ಹುರುಪಿನಲ್ಲಿ!
ಮಗಳಿಗೆ ಗೊಮ್ಮಟನ ಕಥೆ ಹೇಳುತ್ತಾ, ನಗಿಸುತ್ತಾ ಸಾಗಿದೆ...ಮನದನ್ನೆಯು ದುಮುಗುಡುತ್ತಲೇ ಇದ್ದಳು...ಕಡೆಗೆ ವಿಧಿಯಿಲ್ಲದೆ ನಮ್ಮ ಹಾದಿಗೆ ಬಂದಳು...ಕಾರಣ ಸಂಪುಟ ಸಭೆಯಲ್ಲಿ ಮೆಜಾರಿಟಿ ನಮ್ಮ ಕಡೆ ಇತ್ತು....:-)

ಉಸ್ಸಪ್ಪಾ ...ಹೆಂಗಪ್ಪ ಹತ್ತೋದು... ಮನದನ್ನೆ!
ಸುಮಾರು ಒಂದು ಸಾವಿರ ವರ್ಷಗಳ ಆಸು ಪಾಸಿನ, ಬಂಡೆಯ ಮೇಲೆ ಕೆತ್ತಿರುವ, ಲಿಪಿಗಳನ್ನು ಸಂರಕ್ಷಿಸಿರುವ ರೀತಿಯನ್ನು ವಿವರಿಸುತ್ತ, ಅದನ್ನೆಲ್ಲ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಗಿದೆ..

ಸಂರಕ್ಷಿಸುವ ರೀತಿ ಇಷ್ಟವಾಯಿತು
ಪಕ್ಕದಲ್ಲೇ ಒದೆಕಲ್ಲ ಬಸದಿ ಕಾಣಿಸಿತು.. ಕಲ್ಲುಗಂಭಗಳನ್ನು ಸುತ್ತಲು ಆಧಾರವಾಗಿ ನಿಲ್ಲಿಸಿದ್ದರಿಂದ ಇದಕ್ಕೆ ಒದೆಗಲ್ಲ ಬಸದಿ ಎಂದು ಕರೆಯುತ್ತಾರೆ ಎಂದು ಅಲ್ಲಿನ ಒಂದು ಶಾಸನ ಹೇಳಿತು. ಇದು ಸುಮಾರು ಹದಿನಾಲ್ಕನೇ ಶತಮಾನದಲ್ಲಿ ನಿರ್ಮಿಸಿದೆ ಎನ್ನುವ ಮಾಹಿತಿ ಸಿಕ್ಕಿತು. ಒಳಗೆ ಸುಂದರ ಮೂರ್ತಿಗಳು ಇದ್ದವು..ಅದನ್ನೆಲ್ಲ ನೋಡಿ ಮತ್ತೆ  ಮೇಲಕ್ಕೆ ಹತ್ತಲು ಶುರು ಮಾಡಿದೆವು.
ಒದೆಗಲ್ಲ ಬಸದಿ
ಮುಂದೆ ತ್ಯಾಗದ ಕಂಬದ ದರ್ಶನವಾಯಿತು. ಇದು ಎರಡು ಅಂತಸ್ತಿನ ಮಂಟಪದ ಮಧ್ಯ ಭಾಗದಲ್ಲಿ ಕುಸುರಿ ಕೆಲಸ ನಾಜೂಕಾಗಿ ಮಾಡಿರುವ ಸುಮಾರು ಹತ್ತು ಅಡಿ ಕಂಭ ಮನಸೆಳೆಯಿತು. ಸುಮಾರು ಹತ್ತನೆಯ ಶತಮಾನದಲ್ಲಿ ಕೆತ್ತಿಸಿರಬಹುದು ಎಂದು ತಿಳಿಯಿತು. ಸೊಗಸಾದ ಕೆತ್ತನೆ ಎಷ್ಟು ಬಾರಿ ನೋಡಿದರು ಮನತಣಿಯದು.

ತ್ಯಾಗದ ಕಂಬ 
ಇಲ್ಲಿಂದ ಕಾಣುವ ಎದುರಿನಲ್ಲಿರುವ ಚಂದ್ರ ಗಿರಿ, ಕೊಳ, ಸುತ್ತ ಮುತ್ತಲ ದೃಶ್ಯಗಳು ನಯನ ಮನೋಹರ.

ಚಂದ್ರ ಗಿರಿ, ಕೊಳದ ಮನಮೋಹಕ ದೃಶ್ಯ 

ನಿಧಾನವಾಗಿ ಏರುತ್ತಿದ್ದ ಹಾಗೆ ಸುಂದರ ಜಾಲಂಧ್ರಗಳನ್ನು ಹೊಂದಿದ (ಅಖಂಡ ಬಾಗಿಲು) ಹೆಬ್ಬಾಗಿಲು, ಅಕ್ಕ ಪಕ್ಕದಲ್ಲಿ ಗೋಮಟೇಶ್ವರ,  ಭರತೇಶ್ವರರ ವಿಗ್ರಹ, ಕೆಲವು ಸಣ್ಣ ಸಣ್ಣ ಶೀಲ ಶಾಸನಗಳು ಕಣ್ಣಿಗೆ ಬಿದ್ದವು. ಬಂಡೆಯ ಮೇಲೆ ಕೆತ್ತಿರುವ ತೀರ್ಥಂಕರರ ದೃಶ್ಯ ನನ್ನ ಮಗಳ ಮನಸೆಳೆಯಿತು.

ಹಾಗೆಯೇ ಕಡೆಯ ತಿರುವನ್ನು ಹತ್ತಿ ಮೇಲೆ ಬರುವಾಗ ಬಾಗಿಲ ಅಕ್ಕ ಪಕ್ಕದಲ್ಲಿ ರಚಿಸಿರುವ ಕುದುರೆ, ಆನೆ ಚಿತ್ರಗಳು, ಬಸದಿಯ ಹೊರ ಗೋಡೆಗಳು ಸುಂದರವೆನಿಸುವ ಅನುಭವ ನೀಡಿತು.


ಅಲ್ಲಿಯೇ ಕಂಡು ಬರುವ ಗುಳ್ಳೆ ಕಾಯಿ ಅಜ್ಜಿಯ ಮಂಟಪ, ವಿಗ್ರಹ, ಮಧ್ಯದ ಕಂಭವನ್ನು ಬಂಡೆಯಲ್ಲೇ ಕೊರೆದು ನಿರ್ಮಿಸಿರುವ ಮಂಟಪ ಇಷ್ಟವಾಗುತ್ತದೆ. ಸುಮಾರು ಹದಿನಾಲ್ಕನೇ ಶತಮಾನದಲ್ಲಿ ನಿರ್ಮಿತವಾಯಿತು ಎನ್ನುವ ಸಂದೇಶ ಅಲ್ಲಿನ ಲಿಖಿತ ಮಾಹಿತಿಯಿಂದ ತಿಳಿದು ಬಂತು. ದಂತ ಕಥೆಯ ಪ್ರಖಾರ ಚಾವುಂಡರಾಯ ಗೊಮ್ಮಟನ ಶಿಲ್ಪವನ್ನು ಕೆತ್ತಿಸಿದ ಮೇಲೆ ಗರ್ವಿತನಾದಾಗ..ಗರ್ವವನ್ನು ಇಳಿಸಲು ಪದ್ಮಾವತಿ ಯಕ್ಷಿಯು ಗುಳ್ಳೆಕಾಯಿ ಅಜ್ಜಿ ರೂಪದಲ್ಲಿ ಬಂದು ಗರ್ವವನ್ನು ಇಳಿಸಿದಳು.

ಗೋಮಟೇಶ ಕಾವಲು ಇಲ್ಲಿ!
ಅಲ್ಲಿಯೇ ನಿಂತು ತಲೆ ಎತ್ತಿ ನೋಡಿದಾಗ ಇಡಿ ಗಿರಿಯನ್ನು ತನ್ನ ಕಣ್ಣಲ್ಲೇ ಕಾಯುವಂತೆ ನಿಂತಿರುವ ಭಂಗಿಯಂತೆ ಭಾಸವಾಯಿತು. "ಗೋಮಟೇಶ ಕಾವಲು ಇಲ್ಲಿ" ಎನ್ನುವ ಸಾಲು ನೆನಪಿಗೆ ಬಂದಿತು.  ಹಾಗೆ ನೋಡುತ್ತಾ ಒಳಗೆ ಕಾಲಿಟ್ಟೆ...ನನ್ನ ಮಗಳಿಗೆ ಏನೋ ಸಾಧಿಸಿದ ಖುಷಿ. ಬಾಹುಬಲಿಯನ್ನು ಹತ್ತಿರದಿಂದ ನೋಡಿ, ನಮಸ್ಕರಿಸಿ, ಧ್ಯಾನ ಮಾಡಿ, ಅಲ್ಲೇ ಇದ್ದ ಆರ್ಚಕರಿಂದ ತೀರ್ಥವನ್ನು ಪಡೆದ ಮೇಲೆ ತೋರಿದ ಮಂದಹಾಸ ಇನ್ನು ಮನಸಲ್ಲಿ ಅಚ್ಚೊತ್ತಿ ನಿಂತಿದೆ.

ಮನಸಿನ ಜಗತ್ತನ್ನು ಗೆದ್ದು ನಿಂತ!
ಸುಮಾರು ೫೭ ಅಡಿ ಎತ್ತರದ ಸುಮಾರು ೯೮೩ನೆ  ಇಸವಿಯಲ್ಲಿ,  ವಿಶ್ವದಲ್ಲೇ ಒಂದೇ ಬಂಡೆಯಿಂದ ಕೊರೆದ,  ಬೃಹತ್ ಶಿಲ್ಪ ಇದಾಗಿದೆ. ಶಾಂತ ಮುಖ ಭಾವ, ಅರೆ ತೆರೆದ ಕಣ್ಣುಗಳು, ನೀಳವಾದ ಕೈ ಬೆರಳುಗಳು, ನಿಜವೇನೋ ಅನ್ನಿಸುವಂತೆ ಕೆತ್ತಿರುವ ಕಾಲಿನ ಬೆರಳುಗಳು, ಗುಂಗುರು ಕೂದಲು, ನೀಳ ನಾಸಿಕ, ಹುತ್ತದ ಮಧ್ಯೆ ನಿಂತ ಭಂಗಿ, ಹಬ್ಬಿರುವ ಬಳ್ಳಿಯ ಚಿತ್ರಗಳು ತುಂಬಾ ಸಹಜವಾಗಿ ಮೂಡಿ ಬಂದಿದೆ.


ಈ ಚೆಲುವಾಂತ ಚೆನ್ನಿಗನನ್ನು ಚಂದನ, ಕುಂಕುಮ, ಅರಿಶಿನ ಮುಂತಾದ ಮಂಗಳ ದ್ರವ್ಯಗಳಲ್ಲಿ ಮಜ್ಜನ ಮಾಡಿಸುವ ಹನ್ನೆರಡು ವರ್ಷಗಳಿಗೊಮ್ಮೆ ನೆರವೇರುವ ಮಹಾ ಮಸ್ತಕಾಭಿಷೇಕ ಬಲು ಸೊಗಸಾಗಿರುತ್ತೆ. ೨೦೧೮ರಲ್ಲಿ ನಡೆಯುವ ಮಹಾ ಮಜ್ಜನಕ್ಕೆ ಮಗಳನ್ನು ಕರೆದುಕೊಂಡು ಬರುವೆ ಎಂಬ ಸಂಕಲ್ಪದಿಂದ ಹಕ್ಕಿಯ ಮನಸಿನ ಹಾಗೆ ನಿಧಾನವಾಗಿ ಕೆಳಗಿಳಿಯಲು ಶುರು ಮಾಡಿದೆವು. ದೇವಸ್ಥಾನದ ಆವರಣದ ಗೋಡೆಯ ಮೇಲೆ ಉಬ್ಬು ಶಿಲ್ಪದ ಮಾದರಿ ಕೆತ್ತನೆಗಳು ಸುಂದರವಾಗಿದ್ದವು.

ಸುಂದರ ಉಬ್ಬು ಶಿಲ್ಪ!

ನನ್ನ ಕುಟುಂಬ ಮೊದಲ ಚಾರಣದ ಅನುಭವದಲ್ಲಿ!

ಸೂರ್ಯ ತನ್ನದಿನದ ಕಾರ್ಯ ಮುಗಿಸುವ ತರಾತುರಿಯಲ್ಲಿದ್ದ. ಸೂರ್ಯಸ್ಥದ ದೃಶ್ಯವನ್ನು ಸೆರೆ ಹಿಡಿಯಲು ಇನ್ನಷ್ಟು ಹೊತ್ತು ಅಲ್ಲಿರ ಬೇಕಿತ್ತು..ಆದರೆ ಸಮಯದ ಅಭಾವವಿದ್ದ ಕಾರಣ...ಮತ್ತು ಹೊಟ್ಟೆ ಚುರುಗುಟ್ಟುತಿದ್ದುದರಿಂದ ನಿಧಾನವಾಗಿ ಕೆಳಗಿಳಿದು "ಹೋಟೆಲ್ ರಘು" ಗೆ  ಕಾಲಿಟ್ಟೆವು.

ತನ್ನ ಮನೆಗೆ ಹೊರತು ನಿಂತ ದಿನಕರ!
ಮಾಮೂಲಿ ಮಗಳಿಗೆ ಇಡ್ಲಿ, ಮನದನ್ನೆಗೆ ಮಸಾಲಾ ದೋಸೆ, ನನಗೆ ನನ್ನ "ಸೆಟ್ ದೋಸೆ " ಬಂತು. ಚಟ್ನಿ ಬಾಯಿಗಿಟ್ಟೆ..ಆಹಾ..ಈಗಲೂ ಬಾಯಲ್ಲಿ ನೀರು ಬರಿಸುತ್ತೆ...ವಡೆ ಸ್ವಲ್ಪ ತಡವಾಗುತ್ತೆ ಅಂದ್ರು...ಸರಿ ಕಾಯುವ ಅಂದು ಕೂತೆವು.ವಡೆ ಸೀದಾ ಬಾಣಲೆಯಿಂದ ತಟ್ಟೆಗೆ ತಂದು ಹಾಕಿದರು...ಬಿಸಿ ಬಿಸಿ ವಡೆ, ಮಸಾಲೆ ಭರಿತ ಖಾರ ಖಾರ ಚಟ್ನಿ...ಆಹಾ ಆ ಛಳಿಗೆ ಇನ್ನೇನು ಬೇಕು...ಚಟ್ನಿಯ ಮೇಲಿನ ಪ್ರೀತಿಯಿಂದ ಇನ್ನೊಮ್ಮೆ ಮೂರು ಮಂದಿ ವಡೆ-ಚಟ್ನಿ ಬಾರಿಸಿದೆವು ಹೊರಬರುವಾಗ  ನಾಲಿಗೆ ಖುಶಿಯಿಂದ ಆ ಹೋಟೆಲಿನ ಮಾಲಿಕರಿಗೆ "ಸರ್ ಚಟ್ನಿ ಸೂಪರ್.." ಎಂದಿತು..ಮಾಲೀಕರು..ಸಣ್ಣಗೆ ನಗೆ ಬೀರಿದರು..ನಾವು ವಡೆಯಂತೆ ಗರಿ ಗರಿ  ಮನಸಿನಿಂದ ಅಲ್ಲಿಂದ ಹೊರಟೆವು!

Saturday, January 26, 2013

Alemaarigalu Team - Silver Jubilee!

"Sri, you should go sri, what an amazing place, and you love nature very much, start early morning, and by late evening you can come back...you should see that place Sri, you will feel even more energetic"

Post lunch session, to kill the drowziness Kusuma just injected this idea of visiting Gopalaswamy Betta on a weekend.

A casual talk between Sandeep and myself in a cab late in the evening triggered the idea of pushing out of extra calories by being part with the nature for a day, and their an idea of forming a team spilled the bean.

What followed was a dream marathon where in the small team grew big, now brimming with 30 plus members zipping on the beautiful locations with out stamping & littering the mother nature!

We follow very basic rules!
1. No littering, No alcohol, No Cigarettes!
2. Comfort zone is the last word in our team
3. We don't abuse or tease any one (male or female) neither in the group nor the outsiders
4. We only shoot with the camera, and share the pictures among the members without any conditions
5. We chose the best economical mode, so lighter wallet...heavy satisfaction is the motto of the group!
6. We go with the team, come back with team.  No race against each other nor heroism!!!
7. We respect woman as much we respect our parents!


Here you go, and enjoy the beautiful team in many wonderful locations on the earth! This blog is dedicated to Kusuma and the team of Alemaarigalu!

Trip # 1 : 
Team : Srikanth, Sandeep, Ravi, Chethan, Vinay, Tribhuvan
Location: Himavad Gopalaswamy Betta, Nanjanagoodu, Chaamundi Betta, Nimishaamba Temple




Trip # 2 : 

Team : Srikanth, Sandeep, Ravi, Chethan, Vinay, Tribhuvan
Location: Melukote, Shravanabelagola





Trip # 3 : 

Team : Srikanth, Sandeep, Ravi, Chethan, Vinay, Gulshan
Location: Trimurthy Temple, Sangama, Makedaatu






Trip # 4 : 

Team : Srikanth, Sandeep, Ravi, Vinay, Sunil, Raaghu
Location: Golden Temple Bayalukuppe, Nisarga Dhaama, Dubaare, Madikeri, Maandala Patti, Talakaaveri, Bhaagamandala 




Trip # 5: 

Team : Srikanth, Sandeep, Latesh, Yashdeep, Selva, Sunil, Raaghu
Location: Shivana Samudra (Gagana Chukki, Bhara Chukki, Somanaathapura Temple





Trip # 6: 

Team : Srikanth, Sandeep, Latesh, Yashdeep, Sunil, Satish
Location: Gopalaswamy Betta, Balamuri Falls





Trip # 7: 

Team : Srikanth, Sandeep
Location: Kukke Subramanya, Kumara Parvatha



Trip # 8: 


Team : Srikanth, Sandeep, Latesh, Yashdeep, Arun, Kishor
Location: Savana Durga, Manchina Bele, Big Banyan Tree





Trip # 9: 


Team : Srikanth, Sandeep, Latesh, Yashdeep, Swamiji
Location: Kukke Subramanya, Kumara Parvata




Trip # 10: 


Team : Srikanth, Sandeep, Rohit, Ravikanth
Location: Muttatti Temple, Bheemeshwari



Trip # 11: 


Team : Srikanth, Sandeep, Prashanth, Suresh, Shashidhar
Location: Nandi Hills



Trip # 12: 


Team : Srikanth, Sandeep, Prashanth, Latesh, Yashdeep, Sunil, Arvind
Location: Kemmannu Gundi, Z point, Hebbe Falls, Mullayanagiri, Belavaadi Temple, Udbhava Ganapati Temple




Trip # 13: 
Team : Srikanth, Sandeep
Location: Mysore Palace, Sunil's Marriage




Trip # 14: 


Team : Srikanth, Sandeep, Prashanth, Soma, Kishor
Location: Kukke Subramanya, Kumara Parvata





Trip # 15: 


Team : Srikanth, Sandeep, Girish, Arun
Location: Bangalore University Campus



Trip # 16: 


Team : Srikanth, Sandeep, Arun
Location: Kukke Subramanya, Kumara Parvata




Trip # 17: 


Team : Srikanth, Sandeep, Prashanth, Latesh, Yashdeep, Soma, Kishor
Location: Kambala event in Joppina Mogaru, Kadri Temple, Tanneer Bhaavi Beach, Udupi Temple, St. Mary's Island




Trip # 18: 


Team : Srikanth, Sandeep, Girish, Preeti
Location: Rama Devara Betta in Ramanagara



Trip # 19: 


Team : Srikanth, Sandeep, Prashanth, Latesh, Soma, Naveen, Kishor, Ashish, Anil
Location: Dudhsaagar falls



Trip # 20: 


Team : Srikanth, Sandeep, Latesh, Yashdeep, Raghu, Anil, Sunil
Location: Pustakada Mane, Kunti Betta, Venugopalaswamy Temple in KRS backwaters


Trip # 21: 


Team : Srikanth, Sandeep, Prashanth
Location: Rama Devara Betta in Ramanagara




Trip # 22: 


Team : Srikanth, Sandeep, Prashanth
Location: Sri Revana Siddeshwara Betta, Aprameya Temple (Ambegaalu Krishna temple), Heritage Wine yard



Trip # 23: 
Team : Srikanth, Sandeep, Prashanth, Latesh, Raghu, Sunil
Location: Sri Maarikaamba Temple, Banavasi, Sahasra Linga, Saatoddi Falls, Mahaganapati temple, Yaana, Vibhooti Falls, Gokarna Mahabaleshwawra Temple, Kudle Beach



Trip # 24: 


Team : Srikanth, Sandeep, Prashanth, Raghu, Kishor, Nagesh
Location: Waynad, Edkal Caves, Kaarapuzha Dam, Chembra Peak


Trip # 25: 
Team : Srikanth, Sandeep, Prashanth, Ravikanth, Girish Somashekhar, Darshan
Location: Kukke Subramanya, Kumara Parvatha



Thanks to all the members of Alemaarigalu group with whom I could able visit so many vibrant places in our country..Lets keep the lamp of alemaarigalu glowing all the way!